Skip to content
Home » ಕನ್ನಡ » ಜಿನ ರತ್ನ ಭೂಷಣರು » ಆದಿಕವಿ ಪಂಪ

ಆದಿಕವಿ ಪಂಪ

    ಹುಟ್ಟು ಮತ್ತು ನಿಧನ ೧೦ ನೇ ಶತಮಾನ, ಜೈನ ಕವಿ ಪಂಪ (ಕಾಲ ೯೦೨-೯೫೦) ಕನ್ನಡದ “ಆದಿಕವಿ” ಎಂದು ಪ್ರಸಿದ್ಧನಾದವನು.

    ಆದಿಕವಿ ಪಂಪ: ಪೋಸ್ಟಕಾರ್ಡ್ ಕಲ್ಪನೆ – ಮಹಾವೀರ್ ಕುಂದೂರ್, ವರ್ಣಚಿತ್ರ ಚಿತ್ತಜಿನೇಂದ್ರ ಎಂ.ಎಂ., ಬೆಂಗಳೂರು; ಕಲೆ – ಸ್ವಾತಿ ಗ್ರಾಫಿಕ್ಸ್, ಹುಬ್ಬಳ್ಳಿ.

    ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ. ಆದಿಕವಿ ಎಂದು ಹೆಸರು ಪಡೆದ ಪಂಪನು ಕನ್ನಡದ ರತ್ನತ್ರಯರಲ್ಲಿ (ಪಂಪ, ಪೊನ್ನ ಮತ್ತು ರನ್ನ) ಒಬ್ಬನು. ಪಂಪನನ್ನು ಸಾಹಿತ್ಯದ ಯುಗ ಪ್ರವರ್ತಕನೆಂದು ಕನ್ನಡಿಗರು ಗೌರವಿಸಿ ಅವನ ಕಾಲವನ್ನು “ಪಂಪಯುಗ” ವೆಂದು ಕರೆದಿದ್ದಾರೆ, “ಆದಿಪುರಾಣ ಮತ್ತು ವಿಕ್ರಮಾರ್ಜುನ ವಿಜಯ” ಇವೆರಡೂ ಪಂಪನ ಎರಡು ಮೇರು ಕೃತಿಗಳು.

    ಪಂಪನು ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲಿ ಜನಿಸಿದನು. ಇವನ ತಂದೆ ಭೀಮಪ್ಪಯ್ಯ ಮತ್ತು ತಾಯಿ ಅಬ್ಬಣಬ್ಬೆ. ಕ್ರಿ.ಶ. ಸುಮಾರು ೯೦೨ ರಿಂದ ೯೫೫ ರ ವರೆಗೆ ಆಳಿದ ವೇಮುಲವಾಡ ಚಾಲುಕ್ಯ ವಂಶದ ಅರಸು ಇಮ್ಮಡಿ ಅರಿಕೇಸರಿಯ ಆಶ್ರಯದಲ್ಲಿದ್ದ.

    ಪಂಪನ ಪೂರ್ವಜರು ವೆಂಗಿ ಮಂಡಲದವರು. ವೆಂಗಿಮAಡಲವು ಕೃಷ್ಣಾ ಮತ್ತು ಗೋದಾವರಿ ನದಿಗಳ ನಡುವೆ ಇದ್ದ ಪ್ರದೇಶ. ಇದು ಇಂದಿನ ತೆಲಂಗಾಣ ರಾಜ್ಯದ ಕರೀಂ ನಗರ ಜಿಲ್ಲೆಯ ವೇಮುಲವಾಡ ಎಂಬ ಊರು. ಇದರಲ್ಲಿದ್ದ ಏಳು ಗ್ರಾಮಗಳಲ್ಲಿ ವೆಂಗಿಪಳು ಎಂಬುದು ಪ್ರಸಿದ್ಧ ಅಗ್ರಹಾರ. ಅಲಿದ ಜಮದಗ್ನಿ ಪಂಚಾರ್ಷೇಯ ಪ್ರವರದ ಶ್ರೀವತ್ಸ ಗೋತ್ರಕ್ಕೆ ಸೇರಿದ ಕುಟುಂಬಕ್ಕೆ ಸೇರಿದವನು ಪಂಪ.
    ಮಾಧವ ಸೋಮಯಾಜಿ ಎಂಬಾತನನ್ನು ಪಂಪನ ಮನೆತನದ ಹಿರಿಯನೆಂದು ಗುರುತಿಸಲಾಗಿದೆ. ಈತ ಪಂಪನ ಮುತ್ತಜ್ಜನ ತಂದೆ, ಮಾಧವ ಸೋಮಯಾಜಿಯ ಮಗ ಅಭಿಮಾನ ಚಂದ್ರ. ಈತ ಈಗಿನ ಗುಂಟೂರು ಸಮೀಪದ ನಿಡುಗುಂದಿ ಎಂಬ ಅಗ್ರಹಾರದಲಿದ್ದ. ಈತ ಪಂಪನ ಮುತ್ತಜ್ಜ.

    ಅಭಿಮಾನ ಚಂದ್ರನ ಮಗ ಕೊಮರಯ್ಯ. ಈತನ ಕಾಲದಲ್ಲಿ ಈ ಕುಟುಂಬದವರು ಬನವಾಸಿ, ಅಂದರೆ ಕರ್ನಾಟಕದ ಉತ್ತರ ಕನ್ನಡ/ಧಾರವಾಡ ಪ್ರದೇಶಕ್ಕೆ ವಲಸೆ ಬಂದರು, ಕೊಮರಯ್ಯ ಪಂಪನ ಅಜ್ಜ. ಇವನ ಮಗ ಭೀಮಪಯ್ಯ. ಭೀಮಪಯ್ಯನ ಹೆಂಡತಿ ಅಣ್ಣಿಗೇರಿಯ ಜೋಯಿಸ ಸಿಂಘನ ಮೊಮ್ಮಗಳು, ಪಂಪ ಇವರ ಮಗ, ಜಿನವಲ್ಲಭ ಪಂಪನ ತಮ್ಮ.
    ಪಂಪನ ತಂದೆ ಭೀಮಪ್ಪಯ್ಯ, ಯಜ್ಞಯಾಗಾದಿಗಳಲ್ಲಿನ ಹಿಂಸೆಯನ್ನು ವಿರೋಧಿಸಿದ ಜೈನ ಧರ್ಮವನ್ನು ಸ್ವೀಕರಿಸಿದನು. ದೇವೇಂದ್ರಮುನಿ ಎಂಬಾತ ಪಂಪನ ಗುರು.
    ತನ್ನ ಕೃತಿಗಳ ರಚನೆಯ ಕಾಲಕ್ಕೆ ಪಂಪ ಅರಿಕೇಸರಿಯ ಆಶ್ರಯದಲಿದ್ದ. ಪಂಪ ಅರಿಕೇಸರಿಯ ಯೋಧನಾಗಿ ಅಥವ ದಂಡನಾಯಕನಾಗಿದ್ದ ಎಂಬ ಮಾತು ಇದೆ. ಖಡ್ಗವನ್ನು ಹಿಡಿದು ಪರಾಕ್ರಮಿಯಾಗಿ ಯುದ್ಧ ಮಾಡಬಲ್ಲ ಪಂಪನು ಕನ್ನಡ ಭಾಷೆಯಲ್ಲಿ ಅತ್ಯಂತ ಹಿಡಿತ ಉಳ್ಳವನು, ಪ್ರೀತಿಯಿದ್ದವನು, ತನ್ನ ದೇಶಪ್ರೇಮವನ್ನು, “ಆರಂಕುಶವಿಟೊಡA ನೆನೆವುದೆನ್ನ ಮನಂ ಬನವಾಸಿ ದೇಶಮಂ” ಎಂದು ಬಣ್ಣಿÂಸಿ ಪಂಪ ತನ್ನ ತಾಯಾಡನ್ನು ಹೊಗಳಿದ್ದಾನೆ.

    ಪಂಪನು ಪುಲಿಗೆರೆಯ ‘ತಿರುಳ್ ಗನ್ನಡ’ದಲ್ಲಿ ಕಾವ್ಯ ರಚಿಸಿದ್ದೇನೆ ಎಂದಿದ್ದಾನೆ. ಪಂಪನು ಆದಿಪುರಾಣವನ್ನು ಕ್ರಿ.ಶ. ೯೪೧-೪೨ ರಲ್ಲಿ ರಚಿಸಿದ ಇದು ಜಿನಸೇನಾಚಾರ್ಯರ ಪೂರ್ವಪುರಾಣದಲ್ಲಿ ಬಂದಿರುವ ಪ್ರಥಮ ಜೈನ ತೀರ್ಥಂಕರ ವೃಷಭನಾಥನ ಕಥೆಯನ್ನುಹೇಳುತ್ತದೆ.

    ಭಾರತೀಯ ಅಂಚೆ ಇಲಾಖೆ ಹೊರತಂದಿರುವ ಆದಿಕವಿ ಪಂಪನ ವರ್ಣಚಿತ್ರದ ಪೋಸ್ಟಕಾರ್ಡ್.

    ಪಂಪನು ಆದಿಪುರಾಣವನ್ನು ಮೂರು ತಿಂಗಳಿನಲ್ಲಿ ರಚಿಸಿರುವೆನೆಂದು ಹೇಳಿಕೊಂಡಿದ್ದಾನೆ. ಪಂಪನ ಇನ್ನೊಂದು ಕೃತಿ ‘ವಿಕ್ರಮಾರ್ಜುನ ವಿಜಯ’ವು ಮಹಾಭಾರತದ ಕಥೆಯನ್ನು ನಿರೂಪಿಸುತ್ತದೆ. ವ್ಯಾಸರ ಮಹಾಭಾರತ ಕತೆಯನ್ನು ಪ್ರಾದೇಶಿಕ ಭಾಷೆಯಲ್ಲಿ, ದೇಶೀಯ ಗುಣಗಳನ್ನು ಮೇಳವಿಸಿ ಬರೆದ ಮೊದಲ ಕೃತಿ, ವ್ಯಾಸ ಮುನೀಂದ್ರರುAದ್ರ ವಚನಾಮೃತವಾರ್ದಿಯನೀಸುವೆಂ ಕವಿ ವ್ಯಾಸನೆಂಬ ಗರ್ವಮೆನಗಿಲ್ಲ ಎಂದು ವಿನಯದಿಂದ ನುಡಿದಿದ್ದಾನೆ, ತನಗೆ ಆಶ್ರಯ ನೀಡಿದ ಅರಿಕೇಸರಿಯನ್ನು ಅರ್ಜುನನಿಗೆ ಹೋಲಿಸಿ, ಅವನನ್ನೇ ಕಥಾನಾಯಕನನ್ನಾಗಿ ಮಾಡಿಕೊಂಡಿದ್ದಾನೆ. ಪಂಪನು ವಿಕ್ರಮಾರ್ಜುನ ವಿಜಯವನ್ನು ಆರು ತಿಂಗಳಿನಲ್ಲಿ ಬರೆದನಂತೆ. ಇದು ೧೪ ಆಶ್ವಾಸಗಳನ್ನು ೧೬೦೯ ಪದಗಳನ್ನು ಒಳಗೊಂಡಿದೆ.
    ಪAಪ ತನ್ನ ಕೃತಿಗಳಲ್ಲಿ ಹೇಳಿಕೊಂಡಿರುವ ವಿಚಾರಗಳಿಂದ ಮತ್ತು ಅವನ ತಮ್ಮ ಕುಕ್ಕಾö್ರ್ಯಲ್ ಎಂಬ ಗ್ರಾಮದಲ್ಲಿ ನೆಡಿಸಿದ ಶಾಸನದಿಂದ ಈ ವಿವರಗಳು ತಿಳಿದು ಬಂದಿವೆ. ಪಂಪನನ್ನು “ಪಸರಿಪ ಕನ್ನಡಕ್ಕೊಡೆಯನೊರ್ವನೆ ಸವಿ ಪಂಪನಾವಗA” ಎಂದು ಪುಣ್ಯಾಸ್ರವದ ಕವಿ ನಾಗರಾಜನೆಂಬುವನ ನುಡಿ ಕನ್ನಡ ಕವಿಗಳು ಪಂಪನಿಗೆ ಸಲ್ಲಿಸಿರುವ ಕಾವ್ಯ ಗೌರವದ ಪ್ರಾತಿನಿಧಿಕ ವಾಣಿಯಾಗಿದೆ. ಅಲ್ಲದೆ ಮುಂದುವರೆದು “ಏಂ ಕಲಿಯೋ, ಸತ್ಕವಿಯೋ? ಕವಿತಾಗುಣಾರ್ಣವಂ” ಎಂದು ಕೂಡ ಪಂಪನನ್ನು ಹೊಗಳಿದ್ದಾರೆ. ಪಂಪ ಬರೆದ ಎರಡು ಕೃತಿಗಳು ಹಳಗನ್ನಡದ ಕಾವ್ಯ ರಚನೆಯ ಮೇಲೆ ಅತಿ ಹೆಚ್ಚಿನ ಪ್ರಭಾವವನ್ನು ಬೀರಿದವು. ಪುರಾಣ ಮತ್ತು ಇತಿಹಾಸಗಳನ್ನು ಕಾವ್ಯಕ್ಕೆ ಅಳವಡಿಸಿಕೊಳ್ಳುವ ಮಾದರಿಯೊಂದನ್ನು ನಿರ್ಮಿಸಿದವು. ‘ಹಿತಮಿತ ಮೃದುವಚನ’ ಎಂದು ಪಂಪ ತನ್ನ ಭಾಷೆಯ ಬಗ್ಗೆ ಹೇಳಿಕೊಂಡಿದ್ದಾನೆ, ಈ ಶಾಸ್ತಿçÃಯ ಕವಿ ತನ್ನ ಕೃತಿಗಳಲ್ಲಿ ಪರಿಶೀಲಿಸಿದ ಆಶಯಗಳು, ಬಳಸಿದ ರೂಪಕಗಳು ಆಧುನಿಕ ಕನ್ನಡ ಸಾಹಿತ್ಯದ ಕೃತಿಗಳ ಮೇಲೂ ಪರಿಣಾಮ ಬೀರಿವೆ, ವಿಶೇಷವಾಗಿ ಕುವೆಂಪು ಅವರು ಪಂಪನ ಎರಡು ಕಾವ್ಯಗಳ ಆಶಯವನ್ನು ತಮ್ಮ ಕಾದಂಬರಿಗಳಲ್ಲಿ ಹೊಸಬಗೆಯಲ್ಲಿ ಅನ್ವೇಷಿಸಿರುವುದನ್ನು ಕಾಣಬಹುದು.
    ಸಾಹಿತ್ಯ ಕೃತಿಗಳು: ಆದಿಪುರಾಣ-ಮೊದಲನೆಯ ತೀರ್ಥಂಕರನಾದ ಪುರದೇವ/ವೃಷಭದೇವನ ಬಗ್ಗೆ ರಚಿತವಾದ ಜೈನಕಾವ್ಯ. ಜಿನಸೇನಾಚಾರ್ಯರ ಸಂಸ್ಕೃತÀಕಾವ್ಯ ಪೂರ್ವಪುರಾಣ ಇದರ ಆಕರ ಗ್ರಂಥ. ಇದರಲ್ಲಿ ೧೬ ಆಶ್ವಾಸಗಳು ಮತ್ತು ೧೫೫೫ ಪದ್ಯಗಳೂ ಇವೆ. ಇದರಲ್ಲಿ ಪ್ರಮುಖವಾಗಿ ಆದಿತೀರ್ಥಂಕರನಾದ ವೃಷಭದೇವ ಮತ್ತು ಅವನ ಮಕ್ಕಳಾದ ಭರತ ಮತ್ತು ಬಾಹುಬಲಿಗಳ ಪ್ರಸಂಗವು ಚಿತ್ರಿತವಾಗಿದೆ ಹಾಗೂ ಜೈನ ಧರ್ಮದ ವರ್ಣನೆಯ ಜೊತೆಗೆ ಸರ್ವಧರ್ಮದ ಸಮನ್ವಯವನ್ನು ಮೆರೆದಿದ್ದಾನೆ. ವಿಕ್ರಮಾರ್ಜುನ ವಿಜಯ – ಪಂಪಭಾರತವೆAದೇ ಪ್ರಸಿದ್ಧಿ. ಇದರಲ್ಲಿ ವ್ಯಾಸರಚಿತವಾದ ಮಹಾಭಾರತವನ್ನು ಕನ್ನಡಕ್ಕೆ ತಂದ ಕೀರ್ತಿ ಪಂಪನಿಗೆ ಸಲ್ಲುತ್ತದೆ. ಪಂಪ ಭಾರತದಲ್ಲಿ ಅರ್ಜುನನನ್ನು ಪ್ರಧಾನ ಭೂಮಿಕೆಯಲ್ಲಿ ನಿಲ್ಲಿಸಿ ತನ್ನ ದೊರೆ ಅರಿಕೇಸರಿಗೆ ಹೋಲಿಸಿದ್ದಾನೆ. ಮಹಾಭಾರತದ ಕಾವ್ಯದ ವರ್ಣನೆಯ ಜೊತೆಗೆ ಪಂಪ ತನ್ನ ಕಾಲದ ಸಮಾಜದ ನಾಗರೀಕತೆ, ಸಂಪ್ರದಾಯ, ಸಂಸ್ಕೃತಿ ಹಾಗೂ ಜನ ಸಾಮಾನ್ಯರ ಜೀವನದ ಪೂರ್ಣ ಚಿತ್ರಣ ನೀಡಿದ್ದಾನೆ. ಅಂದಿನ ಕಾಲದ ಆಟಗಳು, ವಿದ್ಯಾಭ್ಯಾಸ ಪದ್ಧತಿ, ಜನರ ವಿಲಾಸಿ ಜೀವನ, ಪ್ರಕೃತಿ ಸೌಂದರ್ಯವನ್ನು ಸೊಗಸಾಗಿ ಚಿತ್ರಿಸಿದ್ದಾನೆ.
    ಜೈನ ಲೇಖಕರಾದ ಪಂಪ, ಪೊನ್ನ ಮತ್ತು ರನ್ನರ ಕೃತಿಗಳು, ಒಟ್ಟಾರೆಯಾಗಿ “ಕನ್ನಡ ಸಾಹಿತ್ಯದ ಮೂರು ರತ್ನಗಳು” – ಎಂದು ಕರೆಯಲ್ಪಡುತ್ತವೆ, ಇದು ಮಧ್ಯಕಾಲೀನ ಕನ್ನಡ ಸಾಹಿತ್ಯದ ೧೦ ನೇ ಶತಮಾನದ ಯುಗವನ್ನು ಸಾರಿತು.

    ಭಾರತೀಯ ಅಂಚೆ ಇಲಾಖೆಯು ಕನ್ನಡ ರಾಜ್ಯೋತ್ಸವ – ೨೦೨೨ರ ಅಂಗವಾಗಿ “ಜಿನರತ್ನ ಭೂಷಣರು” ಮಾಲಿಕೆಯ ಭಾಗವಾಗಿ “ಆದಿಕವಿ ಪಂಪನ” ವರ್ಣಚಿತ್ರದ ಪೋಸ್ಟಕಾರ್ಡ್ ಹೊರತಂದಿದೆ. ಹೊಂಬುಜ ಜೈನಮಠದವತಿಯಿಂದ ವರ್ಣಚಿತ್ರದ ಪೋಸ್ಟಕಾರ್ಡುಗಳನ್ನು ಪ್ರಾಯೋಜಿಸಲಾಗಿದೆ.

    Visit this link for an article About “Adikavi Pampa” in English

    error: Jain Heritage Centres - Celebrating Jain Heritage.....Globally!